Madhuvana Karedare

ಮಧುವನ ಕರೆದರೆ
ತನು ಮನ ಸೆಳೆದರೆ
ಶರಣಾಗು ನೀನು ಆದರೆ
ಮಧುವನ ಕರೆದರೆ
ತನು ಮನ ಸೆಳೆದರೆ
ಶರಣಾಗು ನೀನು ಆದರೆ

ಬಿರುಗಾಳಿಯಲ್ಲಿ ತೇಲಿ
ಹೊಸ ಘಳಿಗೆ ಬಂದಿದೆ
ಕನಸೊಂದು ಮೈಯ ಮುರಿದು
ಬಾ ಬಳಿಗೆ ಎಂದಿದೇ
ಶರಣಾಗು ಆದರೆ
ಸೆರೆ ಆಗು ಆದರೆ

ಮಧುವನ ಕರೆದರೆ
ತನು ಮನ ಸೆಳೆದರೆ
ಶರಣಾಗು ನೀನು ಆದರೆ

ಕಂಗಳಲಿ ಕನಸಿನ ಕುಲುಮೆ
ಹೊಳೆಯುತಿದೆ ಜೀವದ ಒಲುಮೆ
ಬೆಳಕಲ್ಲಿ ನೋಡು ಆದರೆ
ಮೈಯೆಲ್ಲಾ ಚಂದ್ರನ ಗುರುತು
ಹೆಸರೆಲ್ಲೋ ಹೋಗಿದೆ ಮರೆತು
ನಾನ್ಯಾರು ಹೇಳು ಆದರೆ

ಮಧುವನ ಕರೆದರೆ
ತನು ಮನ ಸೆಳೆದರೆ
ಶರಣಾಗು ನೀನು ಆದರೆ

ಮನಸಿನ ಹಸಿ ಬಣ್ಣಗಳಲ್ಲಿ
ನೀನೆಳೆವಾ ರೇಖೆಗಳಲ್ಲಿ
ನಾ ಮೂಡಬೇಕು ಆದರೇ
ಎದುರಿದ್ದು ಕರೆಯುವೆ ಏಕೆ
ಜೊತೆಯಿದ್ದು ಮರೆಯುವೆ ಏಕೆ
ನಿನ್ನೊಲವು ನಿಜವೇ ಆದರೆ

ಮಧುವನ ಕರೆದರೆ
ತನು ಮನ ಸೆಳೆದರೆ
ಶರಣಾಗು ನೀನು ಆದರೆ
ಬಿರುಗಾಳಿಯಲ್ಲಿ ತೇಲಿ
ಹೊಸ ಘಳಿಗೆ ಬಂದಿದೆ
ಕನಸೊಂದು ಮೈಯ ಮುರಿದು
ಬಾ ಬಳಿಗೆ ಎಂದಿದೇ
ಶರಣಾಗು ಆದರೆ
ಸೆರೆ ಆಗು ಆದರೆ



Credits
Writer(s): Jayanth Kaykini, Sadhu Kokila
Lyrics powered by www.musixmatch.com

Link